5.7.17


ರಕ್ಷಕ ಶಿಕ್ಷಕ ಸಂಘ ಮಾತೃ ಸಂಘಗಳ ಮಹಾಸಭೆ



ಬಿ.ಪಿ.ಪಿ.ಎ.ಎಲ್.ಪಿ ಪೆರ್ಮುದೆ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘ ಹಾಗೂ ಮಾತೃ ಸಂಘಗಳ ಜಂಟೀ ಮಹಾಸಭೆ ಇತ್ತೀಚೆಗೆ ಜರಗಿತು. ಪೈವಳಿಕೆ ಗ್ರಾಮ  ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀ  ಎಂ.ಕೆ. ಅಮೀರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಮೊಹಮ್ಮದಾಲಿ ವಹಿಸಿಕೊಂಡರು. ಶಾಲಾ ಶೈಕ್ಷಣಿಕ ಬೆಳವಣಿಗೆ ಮಕ್ಕಳ ದಾಖಲಾತಿಯ ಹೆಚ್ಚಳ ಮೊದಲಾದ ವಿಷಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
            ನೂತನ  ಪಿ.ಟಿ.ಎ ಅಧ್ಯಕ್ಷರಾಗಿ ಶ್ರೀ ಮೊಹಮ್ಮದಾಲಿ, ಉಪಾಧ್ಯಕ್ಷರಾಗಿ ಶ್ರೀ  ಸತೀಶ್ ರೈ ಕುಡಾಲು ಗುತ್ತು, ಎಂ.ಪಿ.ಟಿ.ಎ ಅಧ್ಯಕ್ಷೆಯಾಗಿ ಶ್ರೀಮತಿ ರಮಣಿ, ಉಪಾಧ್ಯಕ್ಷೆಯಾಗಿ ಶ್ರೀಮತಿ ಉಷಾ ಕುಮಾರಿ  ಆಯ್ಕೆಗೊಂಡರು.ಪ್ರೀ ಪ್ರೈಮರಿ ವಿಭಾಗದ ಪಿ.ಟಿ.ಎ ಅಧ್ಯಕ್ಷರಾಗಿ ಶ್ರೀ ಜಯರಾಮ ರೈ ಕುಡಾಲು ಗುತ್ತು ಅವರನ್ನು ಆರಿಸಲಾಯಿತು.
            ಶಾಲಾ ಚಟುವಟಿಕೆಗಳ ಬಗ್ಗೆ ಶಾಲಾ ಮುಖ್ಯೊಪಾಧ್ಯಾಯಿನಿ ಶ್ರೀಮತಿ  ಶಾರದಾ ಎ ಮಾಹಿತಿ ನೀಡಿದರು. ಅಧ್ಯಾಪಿಕೆ ಸ್ಮಿತಾ ಡಯಾಸ್ ಸ್ವಾಗತಿಸಿ  ಅಬ್ದುಲ್ ಮುನೀರ್  ವಂದಿಸಿದರು. ಸದಾಶಿವ ಮಾಸ್ಟರ್ ಪೊಯ್ಯೆ ಕಾರ್ಯಕ್ರಮ ನಿರೂಪಿಸಿದರು. 

No comments:

Post a Comment