26.6.23

ವಿಶ್ವ ಮಾದಕ ವಸ್ತು ದಿನಾಚರಣೆ

 

ವಿಶ್ವ ಮಾದಕ ವಸ್ತು ದಿನಾಚರಣೆ


ಬಿ.ಪಿ.ಪಿ..ಎಲ್.ಪಿ. ಪೆರ್ಮುದೆ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ
ಬಿ.ಪಿ.ಪಿ..ಎಲ್.ಪಿ. ಪೆರ್ಮುದೆ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಜರಗಿತು.  ಶಾಲಾ ಅಸೆಂಬ್ಲಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಮಾದಕ ವಸ್ತು ದಿನಾಚರಣೆ ಪ್ರಾಮುಖ್ಯತೆ ಕುರಿತು ತಿಳಿಸಿದರು . ಅಧ್ಯಾಪಕರಾದ ಜಯಪ್ರಸಾದ್ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರತಿಜ್ಞೆ ಹೇಳಿಕೊಟ್ಟರು .ವಿಜ್ಞಾನ ಸಂಘ ನೇತೃತ್ವದಲ್ಲಿ ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತಾದ ವಿಡಿಯೋ ಹಾಗೂ ಚಿತ್ರ ಪ್ರದರ್ಶನ ಜರಗಿತು. ಮಕ್ಕಳಿಗೆ ಪೋಸ್ಟರ್ ರಚಿಸುವ ಚಟುವಟಿಕೆಯು ನಡೆಯಿತು. ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು.

19.6.23

ವಾಚನ ವಾರಾಚರಣೆ ಉದ್ಘಾಟನೆ

 

ಪೆರ್ಮುದೆ ಶಾಲೆಯಲ್ಲಿ ವಾಚನ ವಾರಾಚರಣೆ ಉದ್ಘಾಟನೆ























 ಬಿ.ಪಿ.ಪಿ..ಎಲ್.ಪಿ ಪೆರ್ಮುದೆ ಶಾಲೆಯಲ್ಲಿ ವಾಚನ ವಾರಾಚರಣೆ ಉದ್ಘಾಟನಾ ಕಾರ್ಯಕ್ರಮ ಜರಗಿತುಕಾರ್ಯಕ್ರಮವನ್ನು ಬಡಾಜೆ ಸರಕಾರಿ ಎಲ್.ಪಿ ಶಾಲಾ ಅಧ್ಯಾಪಕರು ಹಾಗೂ ರಂಗ ಚೇತನ ಕಾಸರಗೋಡು ಇದರ ಕಾರ್ಯದರ್ಶಿಯಾದ ಶ್ರೀ ಅಶೋಕ್ ಕುಮಾರ್ ಕೊಡ್ಲಮೊಗರು ಇವರು ಪುಸ್ತಕ ಮರಕ್ಕೆ ಪುಸ್ತಕಗಳನ್ನು ದೇಣಿಗೆಯಾಗಿ ನೀಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಾಚನ ವಾರಾಚರಣೆಯ ಮಹತ್ವದ ಕುರಿತು ಮಕ್ಕಳಿಗೆ ತಿಳಿಸಿದರು.ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ಪುಸ್ತಕ ಪ್ರದರ್ಶನ ಜರಗಿತುಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ ಕೆ.ಕೆ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿದರುಶಾಲಾ ವಿದ್ಯಾರ್ಥಿಗಳು ಪುಸ್ತಕಗಳ ಪ್ರದರ್ಶನವನ್ನು ವೀಕ್ಷಿಸಿದರುವಾಚನ ವಾರಾಚರಣೆಯ ಕುರಿತಾಗಿ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ ಕೆ.ಕೆಮಕ್ಕಳಿಗೆ ತಿಳಿಸಿದರು ವಾಚನ ದಿನದ ಪ್ರತಿಜ್ಞೆಯನ್ನು ಹೇಳಿಕೊಟ್ಟರುವಾಚನ ವಾರಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾ ಯಿತುಶಾಲಾ ಅಧ್ಯಾಪಕರಾದ ಶೀ ಜಯಪ್ರಸಾದ್ ಸ್ವಾಗತಿಸಿ ಅಧ್ಯಾಪಿಕೆ ಶ್ರೀಮತಿ ಸ್ವಾತಿ ವಂದಿಸಿದರು.



5.6.23

 






ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ


ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ ನೇತೃತ್ವದಲ್ಲಿ ಜರಗಿತುಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತುಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಪರಿಸರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರುಶ್ರೀ ಸದಾಶಿವ ಬಾಲಮಿತ್ರ ರಚಿಸಿ ನಿರ್ದೇಶಿಸಿ ನಟಿಸಿದ ಎಕೋ ಕಿರು ಚಲನಚಿತ್ರವನ್ನು ಪ್ರದರ್ಶಿಸಲಾಯಿತು.ವಿದ್ಯಾರ್ಥಿಗಳಿಗೆ ಚಿತ್ರ ರಚನೆಪೋಸ್ಟರ್ತಯಾರಿರಸಪ್ರಶ್ನೆಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು.ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರವನ್ನು ಶುಚಿಗೊಳಿಸಿದರುಪರಿಸರ ಸಂಘದ ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರು.ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು.




1.6.23

 ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ಪ್ರವೇಶೋತ್ಸವ



ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲಾ ಪ್ರವೇಶೋತ್ಸವವು ಮೆರವಣಿಗೆ ಹಾಗೂ ವಿವಿಧ ಮನೋರಂಜನ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರಗಿತುಕಾರ್ಯಕ್ರಮದ ಮೊದಲಿಗೆ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮವನ್ನು ಕೇರಳದ ಮುಖ್ಯಮಂತ್ರಿಗಳಾದ ಶ್ರೀ ಪಿಣರಾಯಿ ವಿಜಯನ್ ಅವರು ಉದ್ಘಾಟಿಸುವ ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಪ್ರದರ್ಶಿಸಲಾಯಿತುಶಾಲಾ ಮುಖ್ಯೋಪಾಧ್ಯಾಯರಾದ ಸದಾಶಿವ ಕೆಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರುವಾರ್ಡು ಸದಸ್ಯೆ ಶ್ರೀಮತಿ ಇರ್ಶಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರುಮಾಜಿ ಪಂಚಾಯತ್ ಸದಸ್ಯರು ಶ್ರೀ ಎಂ.ಕೆ ಅಮೀರ್ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು ,ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಲಲಿತ ಹಾಗೂ ಶ್ರೀಮತಿ ಶಾರದಾಪಿ.ಟಿ.ಎ ಅಧ್ಯಕ್ಷರಾದ ಶ್ರೀ ವಿಠಲ ಸಾಮಾಜಿಕ ಕಾರ್ಯಕರ್ತರಾದ ಶ್ರೀ ಈಶ್ವರ ನಾಯ್ಕಎಂ ಪಿ ಟಿ ಎ ಅಧ್ಯಕ್ಷೆ ಶ್ರೀಮತಿ ಚೇತನ ಶಾಲಾ ವ್ಯವಸ್ಥಾಪಕರಾದ ಶ್ರೀ ರವಿಶಂಕರ್ ಭಟ್ ಎಡಕ್ಕಾನ ಇವರು ನವಾಗತ ಮಕ್ಕಳಿಗೆ ಕಲಿಕೋಪಕರಣಗಳ ಕಿಟ್ ನೀಡಿ ಆದರದಿಂದ ಸ್ವಾಗತಿಸಿ ಶುಭ ಹಾರೈಸಿದರುಬಳಿಕ ಮಕ್ಕಳಿಂದ ವಿವಿಧ ಮನೋರಂಜನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವುಶಾಲಾ ಅಧ್ಯಾಪಿಕೆ ಶ್ರೀಮತಿ ಸ್ವಾತಿ ಸ್ವಾಗತಿಸಿಅಧ್ಯಾಪಕರಾದ ಅಬ್ದುಲ್ ಮುನೀರ್ ವಂದಿಸಿದರುಶಾಲಾ ಶಿಕ್ಷಕಿ ಶ್ರೀಮತಿ ಡೆಫ್ನಿ ಸ್ಮಿತಾ ಡಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.


ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ಪ್ರವೇಶೋತ್ಸವ