1.6.23

 ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ಪ್ರವೇಶೋತ್ಸವ



ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲಾ ಪ್ರವೇಶೋತ್ಸವವು ಮೆರವಣಿಗೆ ಹಾಗೂ ವಿವಿಧ ಮನೋರಂಜನ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರಗಿತುಕಾರ್ಯಕ್ರಮದ ಮೊದಲಿಗೆ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮವನ್ನು ಕೇರಳದ ಮುಖ್ಯಮಂತ್ರಿಗಳಾದ ಶ್ರೀ ಪಿಣರಾಯಿ ವಿಜಯನ್ ಅವರು ಉದ್ಘಾಟಿಸುವ ಕಾರ್ಯಕ್ರಮವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಪ್ರದರ್ಶಿಸಲಾಯಿತುಶಾಲಾ ಮುಖ್ಯೋಪಾಧ್ಯಾಯರಾದ ಸದಾಶಿವ ಕೆಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರುವಾರ್ಡು ಸದಸ್ಯೆ ಶ್ರೀಮತಿ ಇರ್ಶಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರುಮಾಜಿ ಪಂಚಾಯತ್ ಸದಸ್ಯರು ಶ್ರೀ ಎಂ.ಕೆ ಅಮೀರ್ಶ್ರೀ ಸತೀಶ್ಚಂದ್ರ ಭಂಡಾರಿ ಕೋಳಾರು ,ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಲಲಿತ ಹಾಗೂ ಶ್ರೀಮತಿ ಶಾರದಾಪಿ.ಟಿ.ಎ ಅಧ್ಯಕ್ಷರಾದ ಶ್ರೀ ವಿಠಲ ಸಾಮಾಜಿಕ ಕಾರ್ಯಕರ್ತರಾದ ಶ್ರೀ ಈಶ್ವರ ನಾಯ್ಕಎಂ ಪಿ ಟಿ ಎ ಅಧ್ಯಕ್ಷೆ ಶ್ರೀಮತಿ ಚೇತನ ಶಾಲಾ ವ್ಯವಸ್ಥಾಪಕರಾದ ಶ್ರೀ ರವಿಶಂಕರ್ ಭಟ್ ಎಡಕ್ಕಾನ ಇವರು ನವಾಗತ ಮಕ್ಕಳಿಗೆ ಕಲಿಕೋಪಕರಣಗಳ ಕಿಟ್ ನೀಡಿ ಆದರದಿಂದ ಸ್ವಾಗತಿಸಿ ಶುಭ ಹಾರೈಸಿದರುಬಳಿಕ ಮಕ್ಕಳಿಂದ ವಿವಿಧ ಮನೋರಂಜನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವುಶಾಲಾ ಅಧ್ಯಾಪಿಕೆ ಶ್ರೀಮತಿ ಸ್ವಾತಿ ಸ್ವಾಗತಿಸಿಅಧ್ಯಾಪಕರಾದ ಅಬ್ದುಲ್ ಮುನೀರ್ ವಂದಿಸಿದರುಶಾಲಾ ಶಿಕ್ಷಕಿ ಶ್ರೀಮತಿ ಡೆಫ್ನಿ ಸ್ಮಿತಾ ಡಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

No comments:

Post a Comment