15.8.23

ಸ್ವಾತಂತ್ರ್ಯ ದಿನಾಚರಣೆ

 ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ


ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಬಹಳ ವಿಜೃಂಭಣೆ ಯಿಂದ ಜರಗಿತು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು  ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು. ವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಸಭಾ ಕಾರ್ಯಕ್ರಮ ವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ಶಾಲಾ ರಕ್ಷಕ ಶಿಕ್ಷಕ  ಸಂಘದ ಅಧ್ಯಕ್ಷರಾದ ಶ್ರೀ ವಿಠಲ, ಮಾತೃ ಸಂಘದ ಅಧ್ಯಕ್ಷೆ  ಶ್ರೀಮತಿ ಚೇತನ , ಕುಡಾಲು ಮೇರ್ಕಳ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅಬ್ದುಲ್ ಕಾದರ್ ,ಮಾಜಿ ವಾರ್ಡು ಸದಸ್ಯರಾದ ಶ್ರೀ ಎಂ.ಕೆ.ಅಮೀರ್, ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು  ತಿಳಿಸಿದರು.  ಮಕ್ಕಳಿಂದ ವಿವಿಧ ಡ್ರಿಲ್,ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.  ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮವನ್ನು ಅಧ್ಯಾಪಿಕೆ  ಶ್ರೀಮತಿ ಡೆಫ್ನಿ ಸ್ಮಿತಾ  ಡಯಾಸ್ ನಿರೂಪಿಸಿದರು. ಅಧ್ಯಾಪಕರಾದ ಶ್ರೀ ಜಯಪ್ರಸಾದ್ ವಂದಿಸಿದರು.  ರಕ್ಷಕ ಶಿಕ್ಷಕ  ಸಂಘ, ಮಾತೃ ಸಂಘ, ಊರ ಸಂಘ ಸಂಸ್ಥೆಗಳು, ಅಧ್ಯಾಪಕ ವೃಂದ ಸಹಕರಿಸಿದರು.

No comments:

Post a Comment