9.10.24

ಕಲೋತ್ಸವ 2024

 ಬಿ.ಪಿ.ಪಿ..ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಶಾಲಾ ಮಟ್ಟದ ಕಲೋತ್ಸವ



ಬಿ.ಪಿ.ಪಿ..ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಶಾಲಾ ಮಟ್ಟದ ಕಲೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತುಶಾಲಾ

 ಮಟ್ಟದ ಕಲೋತ್ಸವವನ್ನು ಬಾಲ ಪ್ರತಿಭೆಶಾಲಾ ಹಳೆ ವಿದ್ಯಾರ್ಥಿನಿ ಹಾಗೂ ಎಲ್.ಎಸ್.ಎಸ್ ಪರೀಕ್ಷೆ ವಿಜೇತೆ ಕುಬ್ಲೆಸ್ಸಿಕ

 ಪ್ರೇಯಲ್.ಆರ್ ಅವರು ತಮ್ಮ ಕಲೋತ್ಸವದ ನೆನಪುಗಳನ್ನು ,ಅನುಭವಗಳನ್ನು ತಿಳಿಸುತ್ತಾ ಉದ್ಘಾಟಿಸಿದರುಮುಖ್ಯ

 ಅತಿಥಿಗಳಾದ ಧರ್ಮತ್ತಡ್ಕ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್ ಕಲೋತ್ಸವದ ಮಹತ್ವದ ಕುರಿತು

 ತಿಳಿಸಿದರುಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ ಕೆ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.2023-24 ಸಾಲಿನ

 ಎಲ್.ಎಸ್.ಎಸ್ ಪರೀಕ್ಷೆ ವಿಜೇತೆ ಕು.ಬ್ಲೆಸ್ಸಿಕ ಪ್ರೇಯಲ್ ಇವರಿಗೆ ಅತಿಥಿಗಳು ಶಾಲು ಹೊಂದಿಸಿ ಸ್ಮರಣಿಕೆ ನೀಡಿ

ಗೌರವಿಸಿದರುಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ .ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತಾ ,ಶಾಲಾ

 ಎಸ್.ಎಸ್.ಜಿ ಸದಸ್ಯರಾದ ಶ್ರೀ ಅಬ್ದುಲ್ ಖಾದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರುಮಕ್ಕಳಿಂದ ವಿವಿಧ ಸಾಂಸ್ಕೃತಿಕ

 ಕಾರ್ಯಕ್ರಮಗಳು ಜರಗಿದವುಶಾಲಾ ಅಧ್ಯಾಪಿಕೆ ಶ್ರೀಮತಿ ಡೆಫ್ನಿ ಸ್ಮಿತಾ ಡಯಾಸ್ ಕಾರ್ಯಕ್ರಮವನ್ನು

 ನಿರೂಪಿಸಿದರು.ಶಾಲಾ ಅಧ್ಯಾಪಕರಾದ ಜಯಪ್ರಸಾದ ಸ್ವಾಗತಿಸಿ ಅಬ್ದುಲ್ ಮುನೀರ್ ವಂದಿಸಿದರು.


17.9.24

Sports Day

 




Onam Celebration 2024

 ಓಣಂ ಹಬ್ಬ ಆಚರಣೆ

ವಿವಿಧ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ಓಣಂ ಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು.
















15.8.24

78ನೇ ಸ್ಪಾತಂತ್ರ್ಯ ದಿನಾಚರಣೆ

 ಬಿ.ಪಿ.ಪಿ..ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣ


























ಬಿ.ಪಿ.ಪಿ..ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಮೆರವಣಿಗೆಯೊಂದಿಗೆ ಬಹಳ ವಿಜೃಂಭಣೆ ಯಿಂದ ಜರಗಿತುಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರುವಾರ್ಡು ಸದಸ್ಯೆ ಶ್ರೀಮತಿ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುನಿತ ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ,ಕುಡಾಲು ಮೇರ್ಕಳ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅಬ್ದುಲ್ ಖಾದರ್ ಉಪಸ್ಥಿತರಿದ್ದರುಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರುವಯನಾಡಿನ ಮಹಾ ದುರಂತದ ಸಂತಾಪ ಸೂಚಕವಾಗಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತುಮಕ್ಕಳಿಂದ ವಿವಿಧ ಡ್ರಿಲ್,ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತುಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ  ಅತಿಥಿಗಳು  ಬಹುಮಾನಗಳನ್ನು ವಿತರಿಸಿದರುಊರ ಸಂಘ ಸಂಸ್ಥೆಗಳುರಕ್ಷಕರು ಅಧ್ಯಾಪಕ ವೃಂದ ಸಹಕರಿಸಿದರು. ಶಾಲಾ ಅಧ್ಯಾಪಿಕೆ ಶ್ರೀಮತಿ ಸ್ವಾತಿ ಸ್ವಾಗತಿಸಿದರು. ಅಧ್ಯಾಪಿಕೆ ಶ್ರೀಮತಿ ಡೆಫ್ನಿ ಸ್ಮಿತ ಡಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಧ್ಯಾಪಕರಾದ ಜಯಪ್ರಸಾದ್ ವಂದಿಸಿದರು.


5.6.24

 ಬಿ ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ


ಬಿಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ

 ನೇತೃತ್ವದಲ್ಲಿ ಜರಗಿತು.ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ಪರಿಸರ

 ದಿನಾಚರಣೆಗೆ ಚಾಲನೆ ನೀಡಲಾಯಿತುಶಾಲಾಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ

 ಪರಿಸರದಿನಾಚರಣೆಯ ಮಹತ್ವದ ಕುರಿತು ತಿಳಿಸಿದರುವಿದ್ಯಾರ್ಥಿಗಳಿಗೆ ಚಿತ್ರ ರಚನೆ,

  ಪೋಸ್ಟರ್ ತಯಾರಿಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು.ಅಧ್ಯಾಪಕ

 ವೃಂದ ವಿದ್ಯಾರ್ಥಿಗಳು ಸೇರಿಶಾಲಾ ವಠಾರವನ್ನು ಶುಚಿಗೊಳಿಸಿದರುಪರಿಸರ ಸಂಘದ

 ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರುಶಾಲಾ

 ಅಧ್ಯಾಪಕ ವೃಂದ ಸಹಕರಿಸಿದರು.